ಧಾರವಾಡ ಜಿಲ್ಲೆ ಈಗ ದ್ವೀಪಸಮೂಹ, ಧಾರಾಕಾರ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಣೆ
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಧಾರವಾಡ ಜಿಲ್ಲೆ ಕೂಡ ಧಾರಾಕಾರ ಮಳೆಯಿಂದ ಅಕ್ಷರಶಃ ನಲುಗಿದೆ. ನಿನ್ನೆ (ಜೂನ್ 11-ಬುಧವಾರ) ಸುರಿದ ಭಾರೀ ಮಳೆಯಿಂದಾಗಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅದೇ ರೀತಿ ನರಗುಂದ ತಾಲೂಕಿನ ಯಮನೂರು ಗ್ರಾಮದಲ್ಲೂ ಭಾರೀ ಪ್ರಮಾಣದಲ್ಲಿ ಮನೆಗಳಿಗೆ ಮಳೆನೀರು ಹರಿದುಬಂದಿದೆ. ಈ ಮಧ್ಯೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದೆ. ಧಾರವಾಡ ಜಿಲ್ಲೆಯ ಮಳೆಯ ಸಂಪೂರ್ಣ ವರದಿ ಇಲ್ಲಿದೆ.
No comments:
Post a Comment